15ನೇ ಏಪ್ರಿಲ್ 2024; ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಅವರು ಇಂದು ನಾಮ ಪತ್ರ ಸಲ್ಲಿಸಿದರು. ನಾಮ ಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ನಡೆಸಿದರು.
ಸುಡುವ ಬಿಸಿಲನ್ನೂ ಲೆಕ್ಕಿಸದೆ ಸಹಸ್ರಾರು ಜನ, ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು.
ವಿಜಯಪುರದ ಶ್ರೀ ಸಿದ್ದೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಚಿವರು, ಶಾಸಕರು ಪಕ್ಷದ ಹಿರಿಯ ಕಾರ್ಯಕರ್ತರೊಂದಿಗೆ ಗಾಂಧಿ ವೃತ್ತ, ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತಗಳನ್ನು ಹಾದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ನಾಮಪತ್ರ ಸಲ್ಲಿಸಿದರು.
ಸಚಿವರಾದ ಶ್ರೀ ಡಾ. ಎಂ.ಬಿ. ಪಾಟೀಲರು, ಶಿವಾನಂದ ಪಾಟೀಲರು, ಇಂಡಿ ಶಾಸಕರಾದ ಶ್ರೀ ಯಶವಂತರಾಯ ಗೌಡ ಪಾಟೀಲರು, ಮುದ್ದೇಬಿಹಾಳದ ಶಾಸಕರಾದ ಶ್ರೀ ಅಪ್ಪಾಜಿ ನಾಡಗೌಡರು ನಾಮಪತ್ರ ಸಲ್ಲಿಕೆಯ ವೇಳೆ ಅಭ್ಯರ್ಥಿಯ ಜೊತೆಗಿದ್ದರು.
19 сен 2024