Tunga Teeradi Ninta Suyativaranyare - Bhajana Seva at MANTRALAYA temple by Subramanya Bhat Karkala
--------------------------
ತುಂಗಾತೀರದಿ ನಿಂತ ಸುಯತಿವರನ್ಯಾರೆ ಪೇಳಮ್ಮ
ಕೀರ್ತನಕಾರರು : ಜನಾರ್ದನ ವಿಠಲದಾಸರು
ತುಂಗಾತೀರದಿ ನಿಂತ ಸುಯತಿವರನ್ಯಾರೆ ಪೇಳಮ್ಮ ||ಪ||
ಸಂಗೀತಪ್ರಿಯ ಮಂಗಳ ಸುಗಣತರಂಗ ಮುನಿಕುಲೋತ್ತುಂಗ ಕಣಮ್ಮ ||ಅ.ಪ||
ಚೆಲುವ ಸುಮುಖ ಫಣೆಯಲ್ಲಿ ತಿಲಕ ನಾಮಗಳು ನೋಡಮ್ಮ
ಜಲಜಮಣಿಯ ಕೊರಳಲ್ಲಿ ತುಳಸಿಮಾಲೆಗಳು ಪೇಳಮ್ಮ
ಸುಲಲಿತ ಕಮಂಡಲು ದಂಡವನೆ ಧರಿಸಿಹನೆ ನೋಡಮ್ಮ
ಕ್ಷುಲ್ಲ ಹಿರಣ್ಯಕನಲ್ಲಿ ಜನಿಸಿದ ಪ್ರಹ್ಲಾದನು ತಾನಿಲ್ಲಿಹನಮ್ಮ ||೧||
ಸುಂದರ ಚರಣಾರವಿಂದಕೆ ಭಕುತಿಯಲಿಂದ ನೋಡಮ್ಮ
ವಂದಿಸಿ ಸ್ತುತಿಸುವ ಭೂಸುರವೃಂದ ನೋಡಮ್ಮ
ಚಂದದಲ೦ಕೃತಿಯಿಂದ ಶೋಭಿಸುವಾನಂದ ನೋಡಮ್ಮ
ಹಿಂದೆ ವ್ಯಾಸಮುನಿಯೆಂದೆನಿಸಿದ ಕರ್ಮಂದಿಗಳರಸಘದಿಂದ ರಹಿತನೆ ||೨||
ಅಭಿನವ ಜನಾರ್ಧನ ವಿಠಲನ ಧ್ಯಾನಿಸುವ ನೋಡಮ್ಮ
ಅಭಿವಂದಿಸಿದವರಿಗೆ ಅಖಿಲಾರ್ಥವ ಸಲ್ಲಿಸುವ ನೋಡಮ್ಮ
ನಭಮಣಿಯಂದದಿ ವಿವಿಧದಿ ಶೋಭಿಸುವ ನೋಡಮ್ಮ
ಶುಭಗುಣಗಣನಿಧಿ ರಾಘವೇಂದ್ರ ಗುರು ಅಬುಜಭವಾಂಡದಿ ಪ್ರಬಲ ಕಾಣಮ್ಮ ||೩||
Labels: ತುಂಗಾತೀರದಿ ನಿಂತ ಸುಯತಿವರನ್ಯಾರೆ, Tunga Teeradi Ninta Suyativaranyare, ಜನಾರ್ದನ ವಿಠಲದಾಸರು, Janardana Vithaladasaru
20 июн 2024